St. Antony Naravi

 

ಇತ್ತೀಚೆ ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ವನಮಹೋತ್ಸವ ಆಚರಣೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ, ಹೊಸ್ಮಾರು ಕುಂದಾಪುರ ವಿಭಾಗ, ಮೂಡಬಿದ್ರೆ ವಲಯ, ಆಗಮಿಸಿ ಪರಿಸರದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಕಾಲೇಜಿನ ಪರವಾಗಿ ಕಾಲೇಜು ಆವರಣದಲ್ಲಿ ಒಂದು ಗಿಡವನ್ನು ನೆಡಲಾಯಿತು. ಈ ಕಾರ್ಯಕ್ರಮವನ್ನು ಎನ್.ಎಸ್.ಎಸ್. ಹಾಗೂ ಪರಿಸರ ಸಂಘದ ವತಿಯಿಂದ ನಡೆಸಲಾಯಿತು. ವೇದಿಕೆಯಲ್ಲಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಉಪನ್ಯಾಸಕರಾದ ಶ್ರೀ ದಿನೇಶ್ ಬಿ.ಕೆ., ಶ್ರೀ ರಾಜೇಶ್ ಜೈನ್ ವಿದ್ಯಾರ್ಥಿಗಳಾದ ಸುಮನ್ ಜೈನ್, ಅಶ್ವಿತಾ ಎಂ. ಹಾಗೂ ಪದವಿ ಪೂರ್ವ ಕಾಲೇಜಿನ ಶೃತಿ ಮೂಲ್ಯ ಉಪಸ್ಥಿತರಿದ್ದರು.

 

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231