ಅಕ್ಟೋಬರ್ 31, 2017: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಡೆ, ಅವರ 50ನೇ ಪಟ್ಟಾಭಿಷೇಕ ವರ್ಧಂತಿಯ ಹಿನ್ನೆಲೆಯಲ್ಲಿ, ನಾರಾವಿಯ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಪರವಾಗಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ ಹಾಗೂ ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ಲ್ಯಾನ್ಸಿ ಸಲ್ಡಾನ್ಹ ಭೇಟಿ ಮಾಡಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶ್ರೀ ಸಂತೋಷ್ ಸಲ್ಡಾನ್ಹ, ಶ್ರೀ ರಾಜೇಶ್ ಜೈನ್ ಪಿ ಹಾಗೂ ಶ್ರೀ ಗೋಪಾಲಕೃಷ್ಣ ತುಳುಪುಳೆ ಉಪಸ್ಥಿತರಿದ್ದರು.
Comments powered by CComment