St. Antony Naravi

 

ಸಂತ ಅಂತೋನಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ಆಶ್ರಯದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿ ಪರಿಸರ ಹಾಗೂ ಜೀವಿಗಳ ನಡುವಿನ ಸಂಬಂಧದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರಣ್ಯಾಧಿಕಾರಿಗಳಾದ ಶ್ರೀ ಅಜಿತ್ ಕುಮಾರ್‍ರವರು ಮಾತನಾಡಿ ನಾವೆಲ್ಲರೂ ಪರಿಸರವನ್ನು ಉಳಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಶ್ರೀ ಅವಿಲ್ ಮೋರಾಸ್, ಉಪನ್ಯಾಸಕರಾದ ಶ್ರೀಮತಿ ಚೈತ್ರಾ, ಎನ್.ಎಸ್.ಎಸ್. ನಾಯಕರಾದ ಶರತ್ ಹಾಗೂ ಸುಶ್ಮಿತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಸರದ ಬಗ್ಗೆ ನಮ್ಮ ಕಾಳಜಿ ಇದರ ವಿಷಯದಲ್ಲಿ ಚಿಕ್ಕ ಸಾಕ್ಷ್ಯ ಚಿತ್ರವನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು, ಹಾಗೂ ಕಾಲೇಜು ಆವರಣದಲ್ಲಿ ಗಿಡವನ್ನು ನೆಡಲಾಯಿತು.

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231